ಭದ್ರಾವತಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಭದ್ರಾವತಿ ತಾಲ್ಲೂಕಿನ ಕೆ.ಡಿ.ಪಿ ಸಭೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಭದ್ರಾವತಿ ಶಾಸಕರಾದ ಬಿ.ಕೆ. ಸಂಗಮೇಶ್ವರ ರವರೊಂದಿಗೆ ಪಾಲ್ಗೊಂಡಿದ್ದರು.

ಸಭೆಯಲ್ಲಿ ಅರಣ್ಯ, ಕಂದಾಯ, ಆಹಾರ, ಪೋಲಿಸ್, ಆರೋಗ್ಯ, ಮೆಸ್ಕಾಂ, ಪಂಚಾಯತ್ ರಾಜ್, ಲೋಕೋಪಯೋಗಿ, ಆರ್.ಟಿ.ಒ, ಕೆ.ಎಸ್. ಆರ್.ಟಿ.ಸಿ, ಮೀನುಗಾರಿಕೆ, ಭದ್ರಕಾಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ಭೂದಾಖಲೆ, ಕ್ರೀಡಾ, ನೀರಾವರಿ, ಸಹಕಾರ, ಅಬಕಾರಿ, ಕಾನೂನು ಮಾಪನ, ಕೈಗಾರಿಕೆ, ಶಿಕ್ಷಣ, ಕಾರ್ಮಿಕ, ಪಶುಪಾಲನೆ, ತೋಟಗಾರಿಕೆ, ಕೃಷಿ, ಪ್ರವಾಸೋದ್ಯಮ, ತೋಟಗಾರಿಕೆ, ರೇಷ್ಮೆ, ವಾಣಿಜ್ಯ, ನಿರ್ಮಿತಿ, ವಿವಿಧ ಅಭಿವೃದ್ಧಿ ನಿಗಮಗಳ ಇಲಾಖೆಗಳ ಪಗ್ರತಿ ಪರಿಶೀಲನೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಪ್ರದೀಪ್, ರಮೇಶ್ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಅವಿನ್ ಆಹಾರ ಇಲಾಖೆ ಜಂಟಿ ನಿರ್ದೇಶಕರು, ಹಾಗೂ ಸಂಭಂದ ಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…