ನಾಯಿ ಕಚ್ಚಿದ ತಕ್ಷಣ ಗಾಯವನ್ನು ಸೋಪು ಮತ್ತು ನೀರಿನಿಂದ ಸತತ ೧೫ ನಿಮಿಷಗಳ ಕಾಲ ತೊಳೆಯುವುದರಿಂದ ಶೇ ೮೦ ರಷ್ಟು ರೇಬಿಸ್ ಬರದಂತೆ ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ತಿಳಿಸಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವದಿಂದ ರೇಬಿಸ್ ಕಾಯಿಲೆಯ ಗುಣಲಕ್ಷಣಗಳು ಮತ್ತು ನಿಯಂತ್ರಣ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ತಿಳಿಸಿದರು.
ರೇಬಿಸ್ ಕಾಯಿಲೆಯು ಲಿಸ್ಸಾ ವೈರಸ್ ಸೋಂಕಿನಿAದ ಉಂಟಾಗುವ ಮೆದುಳು ಮತ್ತು ನರಮಂಡಲಕ್ಕೆ ಸಂಬAಧಿಸಿದ ಕಾಯಿಲೆಯಾಗಿದ್ದು, ಕಾಯಿಲೆಯ ಗುಣಲಕ್ಷಣಗಳು ಕಾಣಿಸಿಕೊಂಡ ನಂತರ ಬದುಕುಳಿಯಲು ಸಾಧ್ಯವಿಲ್ಲದ ಭಯಾನಕ ಕಾಯಿಲೆ. ಇದು ಸೋಂಕಿತ ನಾಯಿ ಕಚ್ಚುವುದರಿಂದ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಪ್ರತಿ ವರ್ಷ ವಿಶ್ವದ ೧೫೦ ರಾಷ್ಟçಗಳಲ್ಲಿ ಸುಮಾರು ೫೯೦೦೦ ಜನರು ರೇಬಿಸ್ ನಿಂದ ಮರಣ ಹೊಂದುತ್ತಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು ೨೦೦೦೦ ಜನರು ಈ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ನಾಯಿ ಕಚ್ಚಿದ ತಕ್ಷಣ ಗಾಯವನ್ನು ಸೋಪು ಮತ್ತು ಹರಿಯುವ ನೀರಿನಿಂದ ಸ್ವಚ್ಚವಾಗಿ ತೊಳೆದು, ನಂಜು ನಿರೋಧಕಗಳಾದ ಡೆಟ್ಟಾಲ್ ಅಥವಾ ಪಾವಿಡೋನ್ ಅಯೋಡಿನ್ ಹಚ್ಚುವುದರ ಜೊತೆಗೆ ವೈದ್ಯರನ್ನು ಭೇಟಿ ಮಾಡಿ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ೦ ೩ ೭ ೧೪ ಮತ್ತು ೨೮ ನೇ ದಿನಗಳಂದು ತಪ್ಪದೇ ಪಡೆಯುವ ಮೂಲಕ ಈ ಭಯಾನಕ ಕಾಯಿಲೆಯಿಂದ ರಕ್ಷಣೆ ಪಡೆಯಬೇಕೆಂದು ಸಲಹೆ ನೀಡಿದರು. ಉಪನ್ಯಾಸದ ನಂತರ ಸಂವಾದದಲ್ಲಿ ಭಾಗವಹಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಸರಳ ಮತ್ತು ಸೂಕ್ತ ಸಲಹೆಗಳ ಮೂಲಕ ಉತ್ತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ಸುಮತಿ ಜಿ ಕುಮಾರಸ್ವಾಮಿ ಮಾತನಾಡಿ ನಗರದಲ್ಲಿ ಇತ್ತೀಚೆಗೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು ಮತ್ತು ಬೀದಿನಾಯಿಗಳ ನಿಯಂತ್ರಣ ಕುರಿತಂತೆ ಸೂಕ್ತ ಕ್ರಮವಹಿಸಲು ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗದ ಅಧ್ಯಕ್ಷರಾದ ಡಾ. ಅರುಣ್ ಮೈಸೂರ್ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಶಿವಮೊಗ್ಗದ ಅಧ್ಯಕ್ಷರಾದ ಹೆಚ್.ಬಿ. ಆದಿಮೂರ್ತಿ, ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಕುಮಾರಸ್ವಾಮಿ, ಮಾಜಿ ಸಹಾಯಕ ಗವರ್ನರ್‌ಗಳಾದ ಜಿ. ವಿಜಯಕುಮಾರ್, ಚಂದ್ರಹಾಸ್ ಪಿ ರಾಯ್ಕರ್, ರೋಟರಿ ಶಿವಮೊಗ್ಗ ಪೂರ್ವದ ಕಡಿದಾಳ್ ಗೋಪಾಲ್, ಡಾ.ಪರಮೆಶ್ವರ್ ಡಿ. ಶಿಗ್ಗಾಂವ್, ಎನ್. ಹೆಚ್. ಶ್ರೀಕಾಂತ್, ಅರಣ್ ದಿಕ್ಷಿತ್, ಚಂದ್ರಶೇಖರಯ್ಯ, ಸತೀಶ್ ಚಂದ್ರ, ಸಂತೋಷ್, ಕೃಷ್ಣಮೂರ್ತಿ, ಮುಕುಂದೇಗೌಡ, ಕೇಶವಪ್ಪ, ಇನ್ನರ್ ವೀಲ್ ಕ್ಲಬ್‌ನ ಮಾಜಿ ಅಧ್ಯಕ್ಷೆ ರೂಪ ಗುಡದಪ್ಪ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…