ಶಿವಮೊಗ್ಗ ನಗರದ ಬಸವೇಶ್ವರ ನಗರದಲ್ಲಿರುವ ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಕ್ರಿಸ್ ಮಸ್ ಆಚರಿಸಲಾಯಿತು.

ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ರವರು ನೇತೃತ್ವದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜು ರವರ ವಿಶೇಷ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಕೇಕ್ ಕಟ್ ಮಾಡುವ ಮೂಲಕ ಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ರವರು ಈ ಶಾಲೆಯಲ್ಲಿರುವ ಮಕ್ಕಳು ದೇವರ ಸಮಾನ.ಈ ಮಕ್ಕಳಿಗೆ ಕಿವಿ ಕೇಳಸದೇ ಇರುವುದು ಬೇಸರದ ಸಂಗತಿ. ಆದರೆ ಆ ಮಕ್ಕಳಲ್ಲಿ ದೇವರು ವಿಶೇಷ ಜ್ಞಾನವನ್ನು ಕೊಟ್ಟಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಅಧಿಕಾರಿ ರಾಘವೇಂದ್ರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…