ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು ಸನ್ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮುಂದಾಳತ್ವದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿಯವರ ಬಳಿಗೆ ಒಕ್ಕೂಟದ ಮಹಾದಾನಿಗಳಾದ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಮತ್ತು ಮಹಾನಿರ್ದೇಶಕ ತೋನ್ಸೆ ಆನಂದ ಶೆಟ್ಟಿ, ಒಕ್ಕೂಟದ ನಿರ್ದೇಶಕ ಶ್ರೀ ಶಶಿಧರ ಶೆಟ್ಟಿ ಬರೋಡ, ಒಕ್ಕೂಟದ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ ಶೆಟ್ಟಿ ಇವರನ್ನು ಒಳಗೊಂಡ ನಿಯೋಗವು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ.

ಬಂಟ ಸಮುದಾಯದ ಅತಿ ಪ್ರಾಮುಖ್ಯ ಬೇಡಿಕೆಯಾದ ಮೀಸಲಾತಿಯನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ವಿಸ್ತೃತವಾಗಿ ಮನವಿಯನ್ನು ಮಂಡಿಸಲಾಯಿತು.ಬೇಡಿಕೆಗೆ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಸಕರಾತ್ಮಕವಾಗಿ ಸ್ಪಂದನೆ ನೀಡಿ ಸರಕಾರದಿಂದ ನಮ್ಮ ಬೇಡಿಕೆಯನ್ನು ಆದಷ್ಟು ಬೇಗ ಈಡೇರಿಸು ಭರವಸೆಯನ್ನ ನೀಡಿದರು.

ವರದಿ ಮಂಜುನಾಥ್ ಶೆಟ್ಟಿ…