ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ.

ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ರಾದ ಮಾಯಣ್ಣ ಗೌಡ ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ…