ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ಕೊಳದ ನಿವಾಸಿ ಮಾಣಿಕ್ಯ ರವರ ಮನೆಯಲ್ಲಿ ಬಂಗಾರದ ಆಭರಣಗಳು , ಬೆಳ್ಳಿಯ ಚೈನ್ ಮತ್ತು ನಗದನ್ನು ದೋಚಿ ಕಳ್ಳರು ಕೈಚಳಕವನ್ನು ತೋರಿಸಿದ್ದಾರೆ.

ಮಾಲೀಕರು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0014/2023 ಕಲಂ 380 ಐಪಿಸಿ ರೀತ್ಯಾ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿರುತ್ತದೆ.ಶ್ರೀ ಮಿಥುನ್ ಕುಮಾರ್ ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ಸುರೇಶ್ ಎಂ, ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಉಪವಿಭಾಗ-ಬಿ ರವರ ಮೇಲ್ವಿಚಾರಣೆಯಲ್ಲಿ, ಸದರಿ ಪ್ರಕಣದಲ್ಲಿ ಕಳುವಾದ ವಸ್ತುಗಳು ಮತ್ತು ಆರೋಪಿತರ ಪತ್ತೆಗಾಗಿ ಶ್ರೀ ರವಿ ಎನ್ ಎಸ್, ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ರಮೇಶ್ ಎಎಸ್ಐ ಮತ್ತು ಸಿಬ್ಬಂದಿಗಳಾದ ಸಿಪಿಸಿ ರಾಜು ಕೆ.ಆರ್ ಮತ್ತು ಚಂದ್ರಾ ನಾಯ್ಕ್ ರವರುಗಳನ್ನೊಳಗೊಂಡ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ಕೂಡಲೇ ಕಾರ್ಯ ಪ್ರೌವ್ರುತ್ತರಾಗಿ ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರಾದ 1] ರಾಹುಲ್ ಎ.ಆರ್ ಬಿನ್ ಅಣ್ಣಪ್ಪ ಕೆ.ಆರ್, 26 ವರ್ಷ, ಶ್ರೀರಾಮ ಬಡಾವಣೆ ಆಂಜನೇಯ ದೇವಸ್ಥಾನದ ಹತ್ತಿರ ದಾವಣೆಗೆರೆ ಟೌನ್ ಮತ್ತು 2] ಗಣೇಶ ಬಿನ್ ಹಾಲೇಶಪ್ಪ, 28 ವರ್ಷ, ಬೊಮ್ಮನಕಟ್ಟೆ ಬಿ ಬ್ಲಾಕ್ ಕ್ಯಾಂಪ್ ಶಿವಮೊಗ್ಗ ಟೌನ್ ರವರನ್ನು ಪತ್ತೆ ಹಚ್ಚಿ ದಿನಾಂಕಃ 28-01-2023 ರಂದು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,09,250/- ರೂ ಗಳ 30 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 100 ಗ್ರಾಂ ತೂಕದ ಬೆಳ್ಳಿಯ ಚೈನ್ ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ. ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ ತನಿಖಾ ತಂಡದ ಉತ್ತಮ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶ್ಲಾಘಿಸಿ ಬಹುಮಾನವನ್ನು ಘೋಷಿಸಿ ಅಭಿನಂದಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ…