ರಾಜ್ಯದಲ್ಲಿ ಬಹುತೇಕ ಎಲ್ಲಾ ಅನ್ ಲಾಕ್ ಆಗಿದ್ದು ಈ ನಿಟ್ಟಿನಲ್ಲಿ ರಾಜ್ಯದ ವಿಶ್ವವಿದ್ಯಾ ನಿಲಯಗಳು ಸಹ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ತಯಾರಿ ಮಾಡುತ್ತಿವೆ.ಅದೇ ರೀತಿಯ ಹಲವಾರು ವಿಶ್ವವಿದ್ಯಾನಿಲಯಗಳು ಪರೀಕ್ಷಾ ವೇಳಾ ಪಟ್ಟಿಯ ಕುರಿತಂತೆ ಅಧಿಸೂಚನೆ ಹೊರಡಿಸಿದೆ ಈ ನಿಟ್ಟಿನಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಯೋಗಿಕ ಪರೀಕ್ಷೆಗಳನ್ನು ಸಹ ಜುಲೈ 16 ರಿಂದ ನಡೆಸುವ ಕುರಿತು ಅಧಿಸೂಚನೆ ಹೊರಡಿಸಿದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳ ಅವಶ್ಯಕವಾಗಿದ್ದು ಸರ್ಕಾರದ ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳನ್ನು ಸೇರಿದಂತೆ ಎಲ್ಲಾ ಹಾಸ್ಟೆಲ್ ಗಳನ್ನು ಸೂಕ್ತ ಮತ್ತು ಶಿಸ್ತುಕ್ರಮ ಗಳೊಂದಿಗೆ ಮತ್ತೆ ತೆರೆಯಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಶಾಖೆಯೂ ತಮ್ಮನ್ನು ಆಗ್ರಹಿಸುತ್ತದೆ. ಈ ಸಂದರ್ಭದಲ್ಲಿ ದರ್ಶನ್, ನಿದಿ ,ಸಿಂಚನ, ಆದಿತ್ಯ ,ಗಣೇಶ್, ಬಸವರಾಜು, ಮಂಜು, ನಿರಂಜನ್, ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153