ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಅನುಗ್ರಹ ಸೋಷಿಯಲ್ ವೆಲ್ ಫೇರ್ ಸೊಸೈಟಿ, ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ, ಸರ್ಜಿ ಆಸ್ಪತ್ರೆ, ಕಟೀಲು ಅಶೋಕ ಪೈ ಸ್ಮಾರಕ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜು ಗಳ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ನಗರದ ಸೆಕ್ರೆಟ್ ಹಾರ್ಟ್ ಚರ್ಚ್ ಪ್ರಧಾನ ಆಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾ ಮತ್ತು ಅರಿವು ಕಾರ್ಯಕ್ರಮದಲ್ಲಿ ಶ್ರೀ ಜಿ.ಕೆ ಮಿಥುನ್ ಕುಮಾರ್ ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜಾಥಾಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಇಂದಿನ ಆಧುನಿಕ ಜೀವನ ಶೈಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದು ಇದು ಒಂದು ಮಾರಕ ರೋಗ ವಾಗಿದೆ. ಆದ್ದರಿಂದ ಆರೋಗ್ಯಕರ ಮತ್ತು ಉತ್ತಮ ಜೀವನ ಶೈಲಿಯನ್ನು ರೂಢಿಸಿ ಕೊಳ್ಳುವ ಮೂಲಕ ಹಾಗೂ ಕಾಲಕಾಲಕ್ಕೆ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿಕೊಳ್ಳುವ ಮುಖಾಂತರ ಕ್ಯಾನ್ಸರ್ ರೋಗದ ವಿರುದ್ಧ ಜಾಗರೂಕರಾಗಿರಲು ಸಾಧ್ಯವಿರುತ್ತದೆ ಎಂದು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ರಾಜಣ್ಣ ಸಂಕಣ್ಣನವರ್, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ, ಶ್ರೀ ಕ್ಲಿಫರ್ಡ್ ರೋಷನ್ ಫಿಂಟೋ, ನಿರ್ಧೇಶಕರು, ಎಸ್.ಎಂ.ಎಸ್ಎಸ್ಎಸ್. ಶಿವಮೊಗ್ಗ, ಡಾ|| ಅಬ್ರಹಾಂ ಅರೀಪರಂಬಿಲ್, ನಿರ್ಧೇಶಕರು, ಎಸ್.ಎಂ.ಎಸ್ಎಸ್ಎಸ್. ಶಿವಮೊಗ್ಗ ಹಾಗೂ ಎಎಸ್ ಡಬ್ಯುಎಸ್ ರವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…