ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ‌ ಸಂಘದ ವತಿಯಿಂದ ‘ನೆನಪಿನ ಅಂಕಣ’ ಹಿರಿಯ ವಿದ್ಯಾರ್ಥಿಗಳ‌ ವಾರ್ತಾ ಪತ್ರಿಕೆಯನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಎನ್.ಇ.ಎಸ್ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಾ.ಕೆ.ಎಂ.ಬಸಪ್ಪಾಜಿ, ಕಾರ್ಯದರ್ಶಿಗಳಾದ ಎಸ್.ವಿ.ಸತ್ಯನಾರಾಯಣ, ಸಹ ಕಾರ್ಯದರ್ಶಿಗಳಾದ ಸರ್ಜಾ ಸತ್ಯೋಧಯ, ನಿಕಟಪೂರ್ವ ಅಧ್ಯಕ್ಷರಾದ ಡಾ.ಸುರೇಂದ್ರ, ಸಂಪಾದಕರಾದ ಡಾ.ಅಶ್ವಿನಿ.ಜೆ.ಪಿ, ಡಾ.ಎಸ್.ಆರ್.ಅಶ್ವಿನಿ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…