ಬೆಂಗಳೂರಿನಲ್ಲಿ ರಾಜ್ಯ NSUI ವತಿಯಿಂದ ಕಾರ್ಯಕಾರಣಿ ಸಭೆ ಹಾಗೂ ತರಬೇತಿಯನ್ನು ರಾಜ್ಯದ್ಯಕ್ಷರಾದ ಕೀರ್ತಿ ಗಣೇಶ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಶಾಸಕರಾದ ದಿನೇಶ್ ಗುಂಡುರಾವ್ N S U I ನ ಮಾಜಿ ರಾಷ್ಟೀಯ ಅಧ್ಯಕ್ಷರಾದ ಸಲೀಂ ಅಹಮ್ಮದ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಬಿವಿ ಶ್ರೀನಿವಾಸ್ ರವರು KPCC ಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ NSUI ಕಾರ್ಯವನ್ನು ಮೆಚ್ಚಿ ಜಿಲ್ಲಾ ಅಧ್ಯಕ್ಷರಾದ ವಿಜಯ ರವರಿಗೆ ಅತ್ಯುತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ನೀಡುವ ಮೂಲಕ ಶ್ಲಾಲಗಿಸಿದರು.ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ರಾಜ್ಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ