ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷದಿಂದ ಹೊರಡಿಸಿರುವ ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಜೋತಿ ( ಪ್ರತಿ ಮನೆಗೂ ಮಾಸಿಕ 200 ಯೂನಿಟ್ ಉಚಿತ ವಿದ್ಯುತ್) ಹಾಗೂ ಗೃಹಲಕ್ಷ್ಮಿ (ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ಅನುದಾನ) ಹಮ್ಮಿಕೊಂಡಿದ್ದು ( ಐದು ವರ್ಷಗಳಿಗೆ ಪ್ರತಿ ಕುಟುಂಬಕ್ಕೆ ಸುಮಾರು 2 ಲಕ್ಷ ರೂಪಾಯಿಗಳ ಕಾಂಗ್ರೆಸ್ ಪಕ್ಷದ ಭರವಸೆ ) ಇದರ ಅಂಗವಾಗಿ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಜನಪ್ರಿಯ ಸದಸ್ಯರಾದ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಗಳಾದಂತಹ ಹೆಚ್ ಸಿ ಯೋಗೇಶ್ ಶಿವಮೊಗ್ಗ ನಗರ ವಾರ್ಡ್ ನಂಬರ್ 4ರ ಚೌಡೇಶ್ವರಿ ಕಾಲೋನಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳ ಬಗ್ಗೆ ಇಂದು ಪ್ರತಿ ಮನೆಮನೆಗೂ ತೆರಳಿ ಪ್ರತಿಯೊಬ್ಬ ಮಹಿಳೆಯರಿಗೂ ಗ್ಯಾರೆಂಟಿ ಕಾರ್ಡ್ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಎಚ್ ಎಂ ಮಹದೇವ್ ರವರು, ಪುಟ್ಟಮ್ಮರವರು, ಶಾರದಮ್ಮ ರವರು, ಬಾಬಣ್ಣ ರವರು, ರತ್ನಮ್ಮ ರವರು, ಕಾರ್ತಿಕ್ ರವರು, ವಸಂತ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…