ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ಕರೆಂಟ್ ಮತ್ತು ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗ್ಯಾರಂಟಿ ಕಾರ್ಡ್ ಗಳ ವಿತರಣೆ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ನಗರದ ನವುಲೇ ವಾರ್ಡ್ ನ0 2 ರಲ್ಲಿ ಹಮ್ಮಿಕೊಳ್ಳಲಾಗಿತ್ತು.

ನವುಲೇ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಿಸಿ ಬಡಾವಣೆಯ ಪ್ರತಿ ಮನೆಗಳಿಗೆ ತೆರಳಿ ನೋಂದಣಿ ಮಾಡಿ ಯೋಜನೇಯ ಉಪಯೋಗಗಳ ವಿವರಣೆಯನ್ನು ಜನರಿಗೆ ಮನಮುಟ್ಟುವಂತೆ ವಿವರಿಸುವ ಅಭಿಯಾನಕ್ಕೆ ನಗರ ಕಾಂಗ್ರೆಸ್ ಪ್ರಮುಖರು ಚಾಲನೆ ನೀಡಿದರು.

ಈ ಅಭಿಯಾನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಸಿಂಗ್,ಪ್ರಚಾರ ಸಮಿತಿ ಅಧ್ಯಕ್ಷರಾದ ಎನ್ ರಮೇಶ್ ರವರು, ಮಹಾನಗರ ಪಾಲಿಕೆ ಸದಸ್ಯರಾದ ಯೋಗೀಶ್,ಮಾಜಿ ಮಹಾ ಪೌರರಾದ ಮರಿಯಪ್ಪ , ಮಾಜಿ ಉಪ ಮಹಾಪೌರರಾದ ವಿಜಯಲಕ್ಷ್ಮಿ ಪಾಟೀಲ್ , ಕಾಂಗ್ರೆಸ್ ಮುಖಂಡರಾದ ಚೇತನ್, ಮಧುಸೂದನ್, ರಮೇಶ್ ರೆಡ್ಡಿ, ಪರುಶುರಾಮ್, ಶಿವಮೂರ್ತಿ, ಲಕ್ಷ್ಮಣ್, ಮಂಜುನಾಥ್ ಬಡಾವಣೆಯ ಪ್ರಮುಖರು, ಬ್ಲಾಕ್ ಕಾಂಗ್ರೆಸ್ ಪ್ರಮುಖರು, ನಗರ ಕಾಂಗ್ರೆಸ್ ಪ್ರಮುಖರು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ವಾರ್ಡ್/ಬೂತ್ ಪ್ರಮುಖರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ…