ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮತ್ತು ಕೆಪಿಸಿಸಿ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸರ್ಜಿವಾಲ ಅವರು ಶಿವಮೊಗ್ಗ ನಗರಕ್ಕೆ ಆಗಮಿಸಿ ಕಾಂಗ್ರೆಸ್ ಪಕ್ಷದ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಹಾಗೂ ಉಚಿತ ಅಕ್ಕಿ ವಿತರಣೆ ಸೇರಿದಂತೆ ಇನ್ನಿತರ ಯೋಜನೆಗಳ ಕುರಿತು ಕೆಪಿಸಿಸಿ ಇಂದ ನೀಡಿರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯ ಉದ್ಘಾಟನ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ ಕಾಗೋಡು ತಿಮ್ಮಪ್ಪ ಕೆಪಿಸಿಸಿ ಉಪಾಧ್ಯಕ್ಷರಾದ ಮಧು ಬಂಗಾರಪ್ಪ ಸಂಗಮೇಶ್ ಗೋಪಾಲಕೃಷ್ಣ ಬೇಳೂರು ಕಿಮ್ಮನೆ ರತ್ನಾಕರ್ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ಮುಂತಾದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…