ಶಿವಮೊಗ್ಗ : ಸರ್ಜಿ ಫೌಂಡೇಶನ್‌, ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗೆ ಕ್ರಿಕೆಟ್‌ ಅಕಾಡೆಮಿ ಹಾಗೂ ಪರಿಸರಾಸಕ್ತರು ಒಡಗೂಡಿ ಬಿದರೆ ಮಲ್ನಾಡ್‌ ಕ್ಯಾನರ‍ಸರ್‌ ಆಸ್ಪತ್ರೆ ಎದುರಿನ ಶ್ರೀ ಸಾಯಿಬಾಬಾ ಮಂದಿರ ಬಳಿ ನಿರ್ಮಿಸಿರುವ ನೂತನ ಕೆರೆಯ ಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಮಾ. 12 ರ ಭಾನುವಾರ ಬೆಳಗ್ಗೆ 8.00ಗಂಟೆಗೆ ನಡೆಯಲಿದೆ.

ಜಲ ಸಂರಕ್ಷಣೆಯ ಈ ವಿಶೇಷ ಕಾರ್ಯಕ್ರಮದಲ್ಲಿ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಡಾ. ಶ್ರೀಬಸವ ಮರುಳಸಿದ್ಧ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ವಿಧಾನ ಪರಿಷತ್‌ ಸದಸ್ಯರಾದ ರುದ್ರೇಗೌಡ್ರು, ಡಿ. ಎಸ್‌. ಅರುಣ್‌, ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಾಗರಾಜ್‌, ಸೂಡಾ ಮಾಜಿ ಅಧ್ಯಕ್ಷ ಎಸ್‌. ಎಸ್‌. ಜ್ಯೋತಿಪ್ರಕಾಶ್‌ ಭಾಗವಹಿಸುವರು. ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಪರಿಸರ ಪ್ರೇಮಿಗಳು ಹಾಜರಿರುವರು.

ವರದಿ ಪ್ರಜಾ ಶಕ್ತಿ…