ದೊಡ್ಡಪೇಟೆ ಪೊಲೀಸ್ ಠಾಣೆ ವಸಂತ್ ಕುಮಾರ್ ಪಿಎಸ್ಐ ರವರು ಠಾಣಾ ವ್ಯಾಪ್ತಿಯ ಕಸ್ತೂರ್ ಬಾ ಪಾರ್ಕ್ ನಲ್ಲಿ ಬೀಟ್ ಸಮಿತಿ ಸದಸ್ಯರ ಸಭೆ ನಡೆಸಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಸದಾ ಕಾಲ ಕಾರ್ಯ ನಿರ್ವಹಿಸಲಿದ್ದು ಎಂದರು.

ಮುಂಬರುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆಗಾಗಿ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸುವಂತೆ ತಿಳಿಸಿದ್ದು, ಯಾವುದೇ ತುರ್ತು ಸಂದರ್ಭದಲ್ಲಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ / ಇಆರ್.ಎಸ್.ಎಸ್ ತುರ್ತು ಸಹಾಯವಾಣಿ / ಕಂಟ್ರೋಲ್ ರೂಂ ಗೆ ಸಂಪರ್ಕಿಸಿ ಸಹಾಯ ಪಡೆಯುವಂತೆ ಸೂಚಿಸಿದರು.

ವರದಿ ಪ್ರಜಾ ಶಕ್ತಿ…