ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಶ್ರೀ ಆರಗ ಜ್ಞಾನೇಂದ್ರ ಮಾನ್ಯ ಗೃಹ ಸಚಿವರು ಕರ್ನಾಟಕ ಸರ್ಕಾರ ರವರು, ಆನಂದಪುರ ಪೊಲೀಸ್ ಠಾಣೆಯನ್ನು ಉದ್ಘಾಟನೆ ಮಾಡಿದ್ದು, ನಂತರ ನೂತನವಾಗಿ ನಿರ್ಮಿಸಲಿರುವ ಪೊಲೀಸ್ ಠಾಣೆ ಮತ್ತು ವಸತಿ ಗೃಹಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನುಶ್ರೀ ಹರತಾಳು ಹಾಲಪ್ಪ, ಮಾನ್ಯ ಶಾಸಕರು ಸಾಗರ ರವರು ವಹಿಸಿದ್ದರು.ಈ ಸಂದರ್ಭದಲ್ಲಿ ಶ್ರೀ ಮಿಥುನ್ ಕುಮಾರ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ರೋಹನ್ ಜಗದೀಶ್, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು ಸಾಗರ ಉಪ ವಿಭಾಗರವರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…