ತುಂಗಾನಗರ ಪೊಲೀಸ್ ಠಾಣೆಯಲ್ಲಿ ವರದಿಯಾದ ಕೊಲೆ ಪ್ರಕರಣದಲ್ಲಿ ಶ್ರೀ ಟೀಕಪ್ಪ, ಸಿಹೆಚ್.ಸಿ,2017ನೇ ಸಾಲಿನಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಕೊಲೆ ಪ್ರಕರಣದಲ್ಲಿ ಶ್ರೀ ಕರಿಬಸಪ್ಪ ಎಎಸ್ಐ, 2017ನೇ ಸಾಲಿನಲ್ಲಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವರದಿಯಾದ ಎಸ್.ಸಿ ಮತ್ತು ಎಸ್.ಟಿ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಶ್ರೀ ರಾಜಶೇಖರ್ ಶೆಟ್ಟಿಗಾರ್, ಸಿಹೆಚ್.ಸಿ, 2019ನೇ ಸಾಲಿನಲ್ಲಿ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ವರದಿಯಾದ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣದಲ್ಲಿ ಶ್ರೀ ಪ್ರವೀಣ್ ಸಿಪಿಸಿ, 2019ನೇ ಸಾಲಿನಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ವರದಿಯಾದ ಕೊಲೆ ಪ್ರಕರಣದಲ್ಲಿ ಶ್ರೀ ಚಂದ್ರಪ್ಪ ಎಎಸ್ಐ ರವರುಗಳು ತನಿಖಾ ಸಹಾಯಕರಾಗಿ ಮತ್ತು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ವರದಿಯಾದ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣದಲ್ಲಿ ಶ್ರೀ ಮೋಹನ್ ಜಿ, ಪಿಎಸ್ಐ ರವರು ತನಿಖಾಧಿಕಾರಿಗಳಾಗಿ ಕತವ್ಯ ನಿರ್ವಹಿಸಿ, ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ಇವರ ಈ ಉತ್ತಮ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಈ ದಿನ ದಿನಾಂಕಃ 15-03-2023 ರಂದು ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿದರು.

ವರದಿ ಪ್ರಜಾ ಶಕ್ತಿ…