ಶಿವಮೊಗ್ಗ ಬಲಿಜ ಸಂಘದಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರಿಗೆ ಸನ್ಮಾನಿಸಲಾಗದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಬಲಿಜ ಸಮಾಜದ 27 ಉಪಜಾತಿ ಗಳನ್ನು ಒಳಗೊಂಡಂತೆ ಕರ್ನಾಟಕ ಬಲಿಜ ಸಮುದಾಯವು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ ಜಿಲ್ಲಾ ಬಲಿಜ ಸಂಘದಿಂದ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತಿದ್ದು ಆದಷ್ಟು ಬೇಗ ಅಭಿವೃದ್ಧಿ ನಿಗಮ ಕಾರ್ಯನಿರ್ವಹಿಸಲು ಅನುಕೂಲವಾದಂತೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಹೇಳಿದರು.

ಅಲ್ಲದೆ ಔದ್ಯೋಗಿಕವಾಗಿ ಮತ್ತು ರಾಜಕೀಯವಾಗಿ ಎಂದೆ ನಮಗೆ ಆಶ್ವಾಸನೆ ನೀಡಿದಂತೆ ಪೂರ್ಣ ಪ್ರಮಾಣದ ಪ್ರವರ್ಗ 2a ಗೆ ವರ್ಗಾಯಿಸಬೇಕೆಂದು ಶಿವಮೊಗ್ಗ ಜಿಲ್ಲಾ ಬಲಿಜ ಸೇವಾ ಸಂಘ ಆಗ್ರಹಿಸಿದರು.ಮತ್ತು ಕರ್ನಾಟಕ ರಾಜ್ಯ ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಕೊಟ್ಟಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಉಪಸ್ಥಿತರಿದ್ದರು.

ವರದಿ: ಸುರೇಶ್ ಬಿ ಎಸ್…