ಕರ್ನಾಟಕ ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023ರ ಹಿನ್ನೆಲೆಯಲ್ಲಿ06ರಂದು ಸಂಜೆ ಶ್ರೀ ಜಿತೇಂದ್ರ ಕುಮಾರ್ ದಯಾಮ, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ ಮತ್ತು ಶ್ರೀ ಶಿವಾರೆಡ್ಡಿ, ಅಸ್ಸಿಸ್ಟೆಂಟ್ ಕಮಾಡೆಂಟ್, ಸಿಆರ್.ಪಿಎಫ್ ರವರ ನೇತೃತ್ವದಲ್ಲಿ ಭದ್ರಾವತಿ ನಗರದಲ್ಲಿ ರೂಟ್ ಮಾರ್ಚ್ (ಪಥಸಂಚಲನವನ್ನು) ಹಮ್ಮಿಕೊಂಡಿದ್ದು, ಸದರಿ ಪಥಸಂಚಲನವನ್ನು ಭದ್ರಾವತಿಯ ರಂಗಪ್ಪ ಸರ್ಕಲ್ ನಿಂದ ಪ್ರಾರಂಭಿಸಿ ಖಾಜಿ ಮೊಹಲ್ಲಾದಲ್ಲಿ ಮುಕ್ತಾಯ ಮಾಡಲಾಗಿರುತ್ತದೆ.

ಸದರಿ ರೂಟ್ ಮಾರ್ಚ್ ನಲ್ಲಿ ಶ್ರೀ ಶಾಂತಿನಾಥ್, ಪೊಲೀಸ್ ವೃತ್ತ ನಿರೀಕ್ಷಕರು* ಭದ್ರಾವತಿ ನಗರ ವೃತ್ತ, ಶ್ರೀಮತಿ ಭಾರತಿ, ಪೊಲೀಸ್ ಉಪ ನಿರೀಕ್ಷಕರು, ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ, ಶ್ರೀ ಶಿವಾನಂದ್‌ ವನಹಳ್ಳಿ ಪೊಲೀಸ್ ಉಪ ನಿರೀಕ್ಷಕರು, ಭದ್ರಾವತಿ ಹಳೆನಗರ ಪೊಲೀಸ್ ಠಾಣೆ, CRPF (ಕೇಂದ್ರ ಮೀಸಲು ಪೊಲೀಸ್ ಪಡೆ)ಯ ಅಧಿಕಾರಿ ಮತ್ತು ಸಿಬ್ಬಂಧಿಗಳು, ಭದ್ರಾವತಿ ನಗರ ವೃತ್ತದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಭಾಗವಹಿಸಿದ್ದರು.

ವರದಿ ಪ್ರಜಾ ಶಕ್ತಿ…