ಶಿವಮೊಗ್ಗ: ಇಂದಿನಿAದ ಕರ್ನಾಟಕ ವಿಧಾನಸಭಾ ಚುನಾವಣೆಯ ವಿಧಾನ ಸಭಾ ಕ್ಷೇತ್ರ ೧೧೩ (ಶಿವಮೊಗ್ಗ ನಗರ), ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ೧೧೧ರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿAದ ಆರಂಭವಾಗಿದ್ದು, ಉಮೇದುವಾರರು ಬೆಳಿಗ್ಗೆ ೧೧ರಿಂದ ೩ ಗಂಟೆಯವರೆಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಬಹುದಾಗಿದೆ.

ಶಿವಮೊಗ್ಗ ನಗರ ಕ್ಷೇತ್ರ ೧೧೩ರ ನಾಮನಿರ್ದೇಶನ ಪತ್ರಗಳನ್ನು ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ೧೧೧ರ ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ಶಿವಮೊಗ್ಗ ತಾಲೂಕು ಕಚೇರಿ ಆವರಣದಲ್ಲಿ ಮಾಡಿದ್ದು, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳು ಅಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
ಮಹಾವೀರ ವೃತ್ತದಿಂದ ಕೋರ್ಟ್ವರೆಗೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ರಸ್ತೆ ಸಂಚಾರ ನಿರ್ಬಂಧಿಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾನಗರ ಪಾಲಿಕೆ ಆವರಣದಲ್ಲಿ ಕೂಡ ಡಿವಿಎಸ್ ವೃತ್ತ ಮತ್ತು ವೀರಶೈವ ಕಲ್ಯಾನ ಮಂದಿರದವರೆಗೆ ರಸ್ತೆ ಸಂಚಾರ ನಿರ್ಬಂಧಿಸಿದ್ದು÷, ಇದರ ಮಾಹಿತಿ ಇಲ್ಲದ ಸಾರ್ವಜನಿಕರು ಪಾಲಿಕೆ ಕೆಲಸಕ್ಕೆ ಪರದಾಡುವಂತಾಗಿದೆ.

ಚುನಾವಣಾ ಅಧಿಕಾರಿಗಳ ಕಾರ್ಯಾಲಯದಿಂದ ೧೦೦ ಮೀಟರ್ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಸಾರ್ವನಿಕರು ಕಾಲ್ನಡಿಗೆಯಲ್ಲಿ ತೆರಳಿ ತಮ್ಮ ದಿನನಿತ್ಯದ ಕಾರ್ಯ ನಿರ್ವಹಿಸಲು ಯಾವುದೇ ಅಡ್ಡಿ ಎಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಏ.೧೩ರ ಬುಧವಾರ ಮಧ್ಯಾಹ್ನ ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ.

ವರದಿ ಪ್ರಜಾ ಶಕ್ತಿ…