ಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.

ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷ ರಾಷ್ಟಿçÃಯ ಪಕ್ಷವಾಗಿದೆ. ದೆಹಲಿ ಹಾಗೂ ಪಂಜಾಬ್‌ನಲ್ಲಿ ಉತ್ತಮ ಆಡಳಿತ ನೀಡಿದೆ. ಪಕ್ಷದ ಕಾರ್ಯಕ್ರಮವನ್ನು ಸಾರ್ವಜನಿಕರು ಗಮನಿಸಿದ್ದು, ನಿರಂತರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಪಕ್ಷಕ್ಕೆ ನಗರದ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ನನಗೆ ಗೆಲ್ಲುವ ಪೂರ್ಣ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ನಗರ ಅಧ್ಯಕ್ಷರಾದ ಸುರೇಶ್ ಕೋಟೇಕಾರ, ರಮೇಶ್ , ನಜೀರ್ ಅಹ್ಮದ್, ಮುಕ್ಬುಲ್ ಅಹ್ಮದ್ ಹಾಗೂ ಪ್ರಮುಖರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ…