ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಪರ‍್ಯಾ ನಾಯ್ಕ ಇಂದು ತಮ್ಮ ಸಾವಿರಾರು ಬೆಂಬಲಿಗರೊAದಿಗೆ ರವೀಂದ್ರ ನಗರದಿಂದ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳೊಂದಗೆ ಅವವರು ಪೂಜೆ ಸಲ್ಲಿಸಿ, ಅಲ್ಲಿಂದ ಮೆರವಣಿಗೆಯಲ್ಲಿ ಸಾಗಿದರು. ಅವರ ಜೊತೆಗೆ ನೂರಾರು ಲಂಬಾಣಿ ಮಹಿಳೆಯರು ವಿಶಿಷ್ಟವಾದ ರೀತಿಯ ಲಂಬಾಣಿ ನೃತ್ಯ ಮಾಡಿದರು. ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾರದಾ ಪರ‍್ಯಾ ನಾಯ್ಕ, ನನ್ನ ಗೆಲುವು ನಿಶ್ಚಿತ. ಗ್ರಾಮೀಣ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಬಾರಿ ಜೆಡಿಎಸ್ ಅನ್ನು ಗೆದ್ದೇ ಗೆಲ್ಲಿಸುತ್ತಾರೆ. ನನ್ನ ಅಧಿಕಾರಾವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ ಅದು ಜನರ ಮನಸ್ಸಿನಲ್ಲಿದೆ. ನಾನು ಗೆದ್ದು ಬಂದರೆ ಮತ್ತಷ್ಟು ಅಭಿವೃದ್ಧಿ ಮಾಡುವೆ ಎಂದರು.


ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಶಿವಾ ನಾಯ್ಕ, ನಾಗರಾಜ ಕಂಕಾರಿ, ಪಾಲಾಕ್ಷಿ, ಪುಷ್ಪಾ, ರಾಜಣ್ಣ, ಸೇರಿದಂತೆ ಹಲವರಿದ್ದರು.

ವರದಿ ಪ್ರಜಾ ಶಕ್ತಿ…