ಕೇಶವ ಎಸ್ ಪಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಜಿಲ್ಲಾಧ್ಯಕ್ಷ ಹೆಚ್ಎಸ್ ಸುಂದರೇಶ್ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತುಕೊಟ್ಟು ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರತವಾಗಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಸದೃಢವಾಗಿ ಮುನ್ನಡೆಸಲು ಸಹಕರಿಸಬೇಕಾಗಿ ಕೋರಿದ್ದಾರೆ.

ಕಾಂಗ್ರೆಸ್ ಪಕ್ಷದ ಸೂಚನೆ ಮತ್ತು ಆದೇಶಗಳ ಅನುಸಾರವಾಗಿ ಪಕ್ಷ ನೀಡುವ ಜವಾಬ್ದಾರಿ ಮತ್ತು ಪಕ್ಷದ ನೀತಿ ನಿರೋಪನೆಗಳು ಉಲ್ಲಂಘನೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪಕ್ಷದ ಸಂಘಟನೆಗೆ ಇಂದಿನಿಂದಲೇ ತೊಡಗಿಸಿಕೊಂಡು ಕಾರ್ಯೋನ್ಮುಖರಾಗಬೇಕೆಂದು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಿದ್ದಾರೆ.

ವರದಿ ಪ್ರಜಾ ಶಕ್ತಿ…