ಶಿವಮೊಗ: ಕೊನೆಯ ಕ್ಷಣದಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇಂದು ತಮ್ಮ ಅಪಾರ ಬೆಂಬಲಿಗರೊAದಿಗೆ ನಾಮಪತ್ರ ಸಲ್ಲಿಸಿದರು.


ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯಲ್ಲಿದ್ದ ಬೆಂಬಲಿಗರು ಹಾಗೂ ಕಾರ್ಯಕರ್ತರ ಜೊತೆಗೆ ಮೆರವಣಿಗೆಯಲ್ಲಿ ಸಾಗಿದರು. ಘೋಷಣೆಗಳನ್ನು ಕೂಗುತ್ತಾ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ಇದಕ್ಕೂ ಮುನ್ನ ಅವರು ತಮ್ಮ ನಾಯಕ ಕೆ.ಎಸ್. ಈಶ್ವರಪ್ಪನವರ ಮನೆಗೆ ತೆರಳಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಚೆನ್ನಬಸಪ್ಪ ಅವರನ್ನು ಪ್ರೀತಿಯಿಂದ ತಬ್ಬಿ ನೀನು ಗೆದ್ದೇ ಗೆಲ್ಲುತ್ತೀಯಾ ಯಾವ ಆತಂಕವೂ ಬೇಡ ಎಂದು ಈಶ್ವರಪ್ಪ ವಿಶ್ವಾಸ ತುಂಬಿದರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದೇ ಬರುತ್ತದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ. ಬಿಜೆಪಿಯಲ್ಲಿ ಕಾರ್ಯಕರ್ತರು, ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದರು.
ಶಿವಮೊಗ್ಗದಲ್ಲಿ ಈ ಬಾರಿ ತ್ರಿಕೋನಸ್ಪರ್ಧೆ ಆಗುವ ಎಲ್ಲಾ ಲಕ್ಷಣಗಳಿವೆ. ಕಳೆದ ಬಾರಿ೪೬ಸಾವಿರ ಮತಗಳ ಅಂತರದಿAದ ಗೆದ್ದಿದ್ದೆವು. ಈ ಬಾರಿ ೬೦ಸಾವಿರಕ್ಕೂ ಹೆಚ್ಚಿನ ಅಂತರದಿAದ ಗೆಲ್ಲುತ್ತೇವೆ. ನಾನು ರಾಜ್ಯಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗಬೇಕಾಗಿದೆ. ಶಿವಮೊಗ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.


ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಹಿರಿಯರಾದ ಈಶ್ಪರಪ್ಪನವರ ಮಾರ್ಗದರ್ಶನದಲ್ಲಿಯೇ ಈ ಚುನಾವಣೆಯನ್ನು ನಡೆಸುತ್ತೇನೆ. ಕಾರ್ಯಕರ್ತರೆಲ್ಲ ಉತ್ಸಾಹದಿಂದ ಇದ್ದಾರೆ. ಈಶ್ವರಪ್ಪನವರಿಗೆ ಹೇಗೆ ಗೆಲ್ಲಬೇಕೆಂಬುದು ಕರಗತವಾಗಿದೆ. ಅವರ ಹಾದಿಯಲ್ಲೆ ಸಾಗುತ್ತೇನೆ. ಸುಮಾರು ೬೦ ಸಾವಿರ ಮತಗಳ ಅಂತರದಿAದ ಗೆದ್ದೇ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ

ವರದಿ ಪ್ರಜಾ ಶಕ್ತಿ…