ಶಿವಮೊಗ್ಗ: ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸಬೇಕು ಎಂದು ಸ್ವೀಪ್ ತಂಡದ ಅಧಿಕಾರಿ ಅನುಪಮಾ ಮನವಿ ಮಾಡಿದರು.
ಅವರು ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್ ಸಂಖ್ಯೆ ೧, ೨, ೭, ೮, ೯ರಲ್ಲಿ ಮತ್ತು ನವುಲೆ ಹಾಗೂ ಅಶ್ವತ್ಥನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಸ್ವೀಪ್ ತಂಡ ಮತದಾನ ಜಾಗೃತಿಗಾಗಿ ಹಲವು ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದೆ. ಮುಖ್ಯವಾಗಿ ಕಳೆದ ಬಾರಿ ಎಲ್ಲೆಲ್ಲಿ ಶೇಕಡವಾರು ಮತದಾನ ಕಡಿಮೆಯಾಗಿದೆಯೋ ಅಲ್ಲಲ್ಲಿ ಹೆಚ್ಚಿನ ಮಟ್ಟದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಮನೆಮನೆಗೆ ತೆರಳಿ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಸ್ವೀಪ್ ತಂಡದ ಅಧಿಕಾರಿಗಳಾದ ಸುಪ್ರಿಯಾ ರತ್ನಾಕರ್, ರೇಣು, ಗೀತಾ ಸೇರಿದಂತೆ ಹಲವರಿದ್ದರು.

ವರದಿ ಪ್ರಜಾ ಶಕ್ತಿ…