ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಲಕ್ಷ್ಮಿ ಟಾಕೀಸ್ ವೃತ್ತದ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ .ಸಿ.ಯೋಗೇಶ್ ಅವರ ಪರವಾಗಿ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ) ಮುಖಾಂತರ ಜೈಲ್ ಸರ್ಕಲ್ ವೃತ್ತದ ವರೆಗೆ ಕರಪತ್ರಗಳನ್ನು ಹಂಚಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಪ್ರಣಾಳಿಕೆಗಳನ್ನು ನಾಗರಿಕರಿಗೆ ತಿಳಿಸುತ್ತಾ ಮತಯಾಚನೆ ಮಾಡಿದರು.

ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್‍ಪಿ ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ ಕಿರಣ್ ಟಿವಿ ರಂಜಿತ್, ಪದಾಧಿಕಾರಿಗಳಾದ ಎಂ.ರಾಹುಲ್ ಪುಷ್ಪಕ್ ಕುಮಾರ್ ಚಂದ್ರು ಗೆಡ್ಡೆ, ಮೋಹನ್ ಸೋಮನಕೊಪ್ಪ ರಾಹುಲ್ ಸಿಗೆಟ್ಟಿ, ಏನೋಷ್, ರಾಮ , ಚೇತನ್ ಯುವ ಕಾಂಗ್ರೆಸ್ನ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…