ಪ್ರೇರಣ ಸಭಾಂಗಣದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಪೇಜ್ ಪ್ರಮುಖರ ಸಂವಾದ ವನ್ನು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ನಡೆಯಿತು.

ಈ ಸಂವಾದ ಕಾರ್ಯಕ್ರಮಕ್ಕೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ ಎಲ್ ಸಂತೋಷ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ 247 ಬೂತ್ ಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪೇಜ್ ಪ್ರಮುಖರೊಂದಿಗೆ ಸಂವಾದವನ್ನು ನಡೆಸಿದರು.
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೇಜ್ ಪ್ರಮುಖರು ಅನುಸರಿಸಬೇಕಾದ ಕರ್ತವ್ಯಗಳು, ರಾಷ್ಟ್ರದಲ್ಲಿ ಮತ್ತು ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳು ಮತ್ತು ಡಬಲ್ ಇಂಜಿನ್ ಸರ್ಕಾರ ಪ್ರಸಕ್ತ ಸಂದರ್ಭದಲ್ಲಿ ಏಕೆ ಅವಶ್ಯಕ ಎಂಬ ವಿಚಾರಗಳನ್ನು ಪೇಜ್ ಪ್ರಮುಖರಿಗೆ ತಿಳಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಶ್ರೀ ಎಸ್ ದತ್ತಾತ್ರಿ ಮಾತನಾಡಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಪ್ರತಿ ಕುಟುಂಬಗಳಿಗೆ ಬಿಜೆಪಿ ಸರ್ಕಾರದಿಂದ ತಲುಪುತ್ತಿರುವ ಸವಲತ್ತುಗಳನ್ನು ವಿವರಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರು ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶ್ರೀ ಕೆ ಬಿ ಅಶೋಕ್ ನಾಯ್ಕ ರವರು ಮಾತನಾಡಿ ಪೇಜ್ ಪ್ರಮುಖರು ದಿನನಿತ್ಯ ಅನುಸರಿಸಬೇಕಾದ ಚಟುವಟಿಕೆಗಳನ್ನು ಮತ್ತು ಕೇಂದ್ರ ಸರಕಾರದ ಸಾಧನೆಗಳನ್ನು ತಿಳಿಸಿದರು.

ಸಭೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ 247 ಬೂತ್ಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪೇಜ್ ಪ್ರಮುಖರು ಮತ್ತು ಬಿಜೆಪಿಯ ವಿವಿಧ ಸ್ಥರದ ಜವಾಬ್ದಾರಿಗಳನ್ನ ಹೊಂದಿರುವ ಪದಾಧಿಕಾರಿಗಳು ಮತ್ತು ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…