ಶಿವಮೊಗ್ಗ: ಭ್ರಷ್ಟಾಚಾರ ಕೊನೆಗೊಳಿಸಲು ಸ್ವಚ್ಛ ಆಡಳಿತ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಚನ್ನಪ್ಪಗೌಡ ಮನವಿ ಮಾಡಿದರು.


ಅವರು ಇಂದು ಗೋಪಾಲಗೌಡ ಬಡಾವಣೆಯ ಚಂದನ ಆರೋಗ್ಯ ಪಾರ್ಕ್ನಲ್ಲಿ ಮತಯಾಚನೆ ಮಾಡಿ ಮಾತನಾಡಿ, ಒಳ್ಳೆಯ ಆಡಳಿತ ನೀಡಬೇಕು. ಭ್ರಷ್ಟಾಚಾರ ಕೊನೆಗೊಳಿಸಬೇಕು ಎಂಬ ಉದ್ದೇಶದಿಂದ ಕರ್ನಾಟಕದಲ್ಲಿ ೨೦೯ ಕ್ಷೇತ್ರಗಳಲ್ಲಿ ನಾವು ಸ್ಪರ್ಧೆ ಮಾಡಿದ್ದೇವೆ. ಒಳ್ಳೆಯ ಆಡಳಿತ ನೀಡಬೇಕು ಎಂಬುದೇ ನಮ್ಮ ಉದ್ದೇಶ. ಜನ ಬದಲಾವಣೆ ಬಯಸಿದ್ದಾರೆ ಶಿವಮೊಗ್ಗ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿ ಸ್ಪರ್ಧಿಸಿದ್ದಾರೆ. ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.


ಅಭ್ಯರ್ಥಿ ಟಿ. ನೇತ್ರಾವತಿ ಮಾತನಾಡಿ, ಒಮ್ಮೆ ನಮಗೆ ಅವಕಾಶ ಕೊಡಿ. ನಾವು ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ. ಬದಲಾವಣೆ ಜಗದ ನಿಯಮ ಎಂಬುದನ್ನು ಸಾಬೀತುಪಡಿಸಿ ಇಂದು ಕೆಲವು ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ಧರ್ಮ ಮತ್ತ ಜಾತಿಗಳನ್ನು ತರುತ್ತಿವೆ. ಇದು ಸರಿಯಲ್ಲ. ಆದರೆ, ನಮ್ಮ ಪಕ್ಷ ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಸೌಕರ್ಯಕ್ಕೆ ಒತ್ತು ಕೊಡುತ್ತಿದೆ. ಶಿವಮೊಗ್ಗದಲ್ಲಿ ಪಕ್ಷಕ್ಕೆ ಜನರಿಂದ ಒಳ್ಳೆಯ ಸ್ಪಂದನೆ ಇದೆ. ಗೆಲ್ಲುವ ನಿರೀಕ್ಷೆ ಇದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ರಾಮಕೃಷ್ಣ, ಶೋಭಾ ಮೊದಲಾದವರಿದ್ದರು.

ವರದಿ ಪ್ರಜಾ ಶಕ್ತಿ…