ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು.ಪಾಶ(ಜುಬೇರ್ ಪಾಶ) ರವರನ್ನು ಜಿಲ್ಲಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಜಾರಿಗೆ ಬಂದಿದ್ದು, ನೇಮಕ ಮಾಡಿದ ಜಿಲ್ಲಾ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕಲೀಂ ಪಾಷ, ಸುಧೀರ್ ಕುಮಾರ್ ಹಾಗೂ ಪಕ್ಷದ ಎಲ್ಲಾ ಹಿರಿ ಕಿರಿಯ ಮುಖಂಡರಿಗೆ ಶಿ.ಜು.ಪಾಶ ಈ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ವರದಿ ಪ್ರಜಾಶಕ್ತಿ…