ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಇಂದು ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರ ನಡೆಸಿದರು.

ಇದೇ ವೇಳೆ ರಾಜಕೀಯ ವಿಶ್ಲೇಷಕರು ಹಾಗೂ ಸಿಎಸ್‌ಎಸ್‌ಇಐಪಿ ನಿವೃತ್ತ ನಿರ್ದೇಶಕರಾದ ಶ್ರೀ ಕಂಚಾ ಇಳೈ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಸ್ತುತ ರಾಜಕೀಯ ಹಾಗೂ ವಿವಿಧ ರಾಜ್ಯದಲ್ಲಿನ ಶಿಕ್ಷಣ ಕ್ಷೇತ್ರದ ಬಗ್ಗೆ ಚರ್ಚಿಸಿದರು.

ನಂತರದಲ್ಲಿ ಮಾನ್ಯ ಸಚಿವರು ಹೈದರಾಬಾದ್‌ನ ಮದೀನಾ ಎಜುಕೇಶನ್ ಸೆಂಟರ್ ನಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ (ಒಬಿಸಿ) ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ವರದಿ ಪ್ರಜಾಶಕ್ತಿ…