ಅಪರಾಧ ತಡೆ ಮಾಸಾಚರಣೆ- 2023ರ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಶ್ರೀ ಸುರೇಶ್ ಎಂ ಡಿವೈಎಸ್ಪಿ ಶಿವಮೊಗ್ಗ ಬಿ ಉಪ ವಿಭಾಗ ರವರು ಮತ್ತು ಶ್ರೀ ಸಿದ್ದೇಗೌಡ ಪಿಐ ಜಯನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಸರ್ವೋದಯ ಪ್ರಥಮ ದರ್ಜೆ ಮಹಿಳಾ ಕಾಲೇಜ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳು, ಸಾಮಾಜಿಕ ಜಾಲತಾಣದ ಅತಿಯಾದ ಬಳಕೆಯ ದುಷ್ಪರಿಣಾಮಗಳು, ರಸ್ತೆ ಸುರಕ್ಷತೆಯ ಮಹತ್ವ, ಸಂಚಾರ ನಿಯಮ ಪಾಲನೆಯ ಅವಶ್ಯಕತೆ, ಪೋಕ್ಸೋ ಕಾಯ್ದೆ, ಐಎಂವಿ ಕಾಯ್ದೆ, ಸೈಬರ್ ಕ್ರೈಂಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶ್ರೀ ನವೀನ್ ಪಿಎಸ್ಐ ಜಯನಗರ ಪೊಲೀಸ್ ಠಾಣೆ ಮತ್ತು ಸರ್ವೋದಯ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…