ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ ರವರ ನೇತೃತ್ವದಲ್ಲಿ ಸಾರ್ವಜನಿಕರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಸಂಬಂಧ ಶಿವಮೊಗ್ಗ ಟೌನ್ ನಲ್ಲಿ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಸದರಿ ಬೈಕ್ ರ್ಯಾಲಿಯನ್ನು ಶಿವಮೊಗ್ಗ ನಗರದ ಅಶೋಕ ವೃತ್ತದಿಂದ ಪ್ರಾರಂಭಿಸಿ, ಎಎ ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ, ಕೆಇಬಿ ವೃತ್ತ, ಶಂಕರ್ ಮಠ ವೃತ್ತ, ಗಾಂಧಿ ಬಜಾರ್ ರಸ್ತೆ, ಕೆಆರ್ ಪುರಂ ರಸ್ತೆ ಯಿಂದ ಒಟಿ ರಸ್ತೆ ಮುಖಾಂತರ ಅಶೋಕ ವೃತ್ತಕ್ಕೆ ಬಂದು ಮುಕ್ತಾಯ ಮಾಡಲಾಗಿರುತ್ತದೆ.

ಸದರಿ ಬೈಕ್ ರ್ಯಾಲಿಯಲ್ಲಿ ಶ್ರೀ ಸಂತೋಷ್ ಕುಮಾರ್, ಸಿಪಿಐ ಶಿವಮೊಗ್ಗ ಸಂಚಾರವೃತ್ತ, ಶ್ರೀ ನವೀನ್ ಕುಮಾರ್ ಮಠಪತಿ, ಪಿಎಸ್ಐ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ, ಶ್ರೀ ತಿರುಮಲೇಶ್ ನಾಯ್ಕ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಸೇರಿದಂತೆ 50 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

ವರದಿ ಪ್ರಜಾಶಕ್ತಿ…