ಭಾರತೀಯ ಕುಸ್ತಿ ಸಂಘ…

ಭಾರತೀಯ ಕುಸ್ತಿ ಸಂಘದ(ರಿ.) ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪಟ್ಟಿ…

ಅಧ್ಯಕ್ಷರು ಸಂಜಯ್‌ ಕುಮಾರ್‌ ಸಿಂಗ್‌, ಹಿರಿಯ ಉಪಾಧ್ಯಕ್ಷರು ದೇವೇಂದರ್‌, ಉಪಾಧ್ಯಕ್ಷರು ಅಸಿತ್‌ ಕುಮಾರ್‌ ಸಹ, ಜಯಪ್ರಕಾಶ್‌, ಕಾರ್‍ತರ್‌ ಸಿಂಗ್‌, ಎನ್‌.ಫೋನಿ, ಪ್ರಧಾನ ಕಾರ್ಯದರ್ಶಿ ಪ್ರೇಮ್‌ ಚಂದ್‌ ಲೊಚಬ್‌, ಕೋಶಾಧಿಕಾರಿ ಸತ್ಯಪಾಲ್‌ ಸಿಂಗ್‌ ದೇಶ್‌ವಾಲ್‌, ಜಂಟಿ ಕಾರ್ಯದರ್ಶಿ ಬೆಳ್ಳಿಪ್ಪಾಡಿ ಗುಣರಂಜನ್‌ ಶೆಟ್ಟಿ, ಆರ್‌.ಕೆ.ಪುರುಶೋತ್ತಮ್‌, ಕಾರ್ಯಕಾರಿ ಸಮಿತಿಯ ಸದಸ್ಯರು ಎಮ್‌.ಲೋಗನಾಥನ್‌, ನೈವಿಕೌಲಿ ಖಾತ್ಸು, ಪ್ರಶಾಂತ್‌ ರೈ, ರಜನೀಶ್‌ ಕುಮಾರ್‌, ಉಮ್ಮೆದ್‌ ಸಿಂಗ್ ಆಯ್ಕೆಯಾಗಿದ್ದಾರೆ.

ವರದಿ ಪ್ರಜಾಶಕ್ತಿ