ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ದಾವಣಗೆರೆ ಜಿಲ್ಲೆಯ ಜಮಾಪುರ ಮುಖ್ಯರಸ್ತೆಯ ಆನಗೋಡಿನಲ್ಲಿ ತೀವ್ರ ಬರದಿಂದ ಸಂಪೂರ್ಣ ಬೆಳೆ ಹಾನಿಗೊಳಗಾಗಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಸ್ಥಳ ಪರಿವೀಕ್ಷಣೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸಾಂತ್ವನ ಹೇಳಿದರು.


ಎಲ್ಲೆಡೆ ಮಳೆಯಿಲ್ಲದೆ ಪಸಲು ನೆಲಕಚ್ಚಿದ್ದು, ರೈತ ಸಮುದಾಯ ಕಂಗಾಲಾಗಿರುವ ಸಂದರ್ಭದಲ್ಲಿ ಎಲ್ಲದಕ್ಕೂ ಕೇಂದ್ರದೆಡೆ ಬೆಟ್ಟು ತೋರಿಸಿ ಜನಹಿತ ಮರೆತಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸಿ, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಲಾಯಿತು.

ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಾಗೂ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವರಾದ ಶ್ರೀ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಶ್ರೀ ಬಿ.ಪಿ.ಹರೀಶ್, ಜಿಲ್ಲಾಧ್ಯಕ್ಷರಾದ ಶ್ರೀ ಹನಗವಾಡಿ ವೀರೇಶ್, ಮುಖಂಡರಾದ ಶ್ರೀ ಲೋಕಿಕೆರೆ ನಾಗರಾಜ್, ಶ್ರೀ ಜಿ.ಎಸ್.ಅನಿತ್ ಕುಮಾರ್, ಶ್ರೀ ಎಸ್.ಎ.ರವೀಂದ್ರನಾಥ್, ಶ್ರೀ ಲಿಂಗಣ್ಣ , ಶ್ರೀ ಬಸವರಾಜ ನಾಯ್ಕ್ ಅವರು, ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ