ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಹುದ್ದೆಯನ್ನು ನೀಡಲಾಗಿದ್ದು ಕಾರಿಯಪ್ಪ ಅವರು ಅಧಿಕಾರಿ ವಹಿಸಿಕೊಂಡಿದ್ದಾರೆ.

ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಸಚಿವರು ಕಾರಿಯಪ್ಪ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಡಿವೈಎಸ್‌ಪಿ ಬಾಲರಾಜ್, ತುಂಗಾ ನಗರ ಸಿಪಿಐ ಮಂಜುನಾಥ್, ಮಾಜಿ ಶಾಸಕ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಪ್ರಮುಖರಾದ ಎಸ್.ಕೆ.ಮರಿಯಪ್ಪ, ಜಿ.ಡಿ.ಮಂಜುನಾಥ್, ಕಲಗೋಡು ರತ್ನಾಕರ್, ದೇವಿಕುಮಾರ್, ಜಿ.ಪದ್ಮನಾಬ್ ಹಾಗೂ ಇತರರಿದ್ದರು.

ವರದಿ ಪ್ರಜಾಶಕ್ತಿ