ಸ್ಥಳೀಯ ಗುತ್ತಿಗೆದಾರರನ್ನು ಕಡೆಗಣಿಸಿ ಸರ್ಕಾರಿ ಯೋಜನೆಗಳ ಸಣ್ಣ ಸಣ್ಣ ವಿದ್ಯುತ್ ಕಾಮಗಾರಿಗಳ ಕಾರ್ಯದೇಶಗಳನ್ನು ಕ್ರೂಡೀಕರಿಸಿ ಬೃಹತ್ ಮಟ್ಟದ ದರ ಒಪ್ಪಂದ ಮತ್ತು ಟೆಂಡರ್ ಕರೆದಿರುವ ಮೆಸ್ಕಾಂ ವಿರುದ್ಧ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿನಾಂಕ 17.01.2024 ರಿಂದ ನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


ಅಕ್ರಮ ಸಕ್ರಮ ಗಂಗಾ ಕಲ್ಯಾಣ ಕುಡಿಯುವ ನೀರಿನ ಯೋಜನೆ ರೀ ಕಂಟ್ರಕ್ಟರಿಂಗ್ ಲಿಂಕ್ ಹಾಗೂ ಮುರಿದಿರುವ ಕಂಬಗಳ ಕಾಮಗಾರಿಗಳನ್ನು ಕ್ರೂಡೀಕರಿಸಿ ಈಗಾಗಲೇ ಕರೆದಿರುವ ಬೃಹತ್ ಮೊತ್ತದ ದರ ಒಪ್ಪಂದ ಹಾಗೂ ಟೆಂಡರ್ ಗಳನ್ನು ರದ್ದುಪಡಿಸಬೇಕು ಮತ್ತು ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು ರಾಜ್ಯಾಧ್ಯಕ್ಷರನ್ನೊಳಗೊಡಂತೆ ಹಲವರು ಪಾಲ್ಗೊಂಡಿದ್ದರು.