ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಸಂಪೂರ್ಣ ಬಿಜೆಪಿ ಕಾರ್ಯಕ್ರಮ ಎಂದು ಕೆಪಿಸಿಸಿ ಸಂಯೋಜಕ ಮತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಮಂಜುನಾಥ್ ಜಿ ಡಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ 17.1.2024 ರಂದು ಕೇಂದ್ರ ಸರ್ಕಾರದ ಯೋಜನೆಗಳ ಜನ ತಿಳುವಳಿಕೆ ಕಾರ್ಯಕ್ರಮವು ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಸಂಪೂರ್ಣ ಬಿಜೆಪಿಯ ಕಾರ್ಯಕ್ರಮದಂತೆ ಎಂದು ಬಿಂಬಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಿರೂಪಣೆ ಮತ್ತು ವೇದಿಕೆಯಲ್ಲಿ ಅತಿಥಿಗಳನ್ನಾಗಿ ಬಿಜೆಪಿ ಪಕ್ಷದ ಮುಖಂಡರನ್ನು ಬಳಸಿಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆ ಆಗಿರುತ್ತದೆ ಎಂದರು.

ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಲೀಡ್ ಬ್ಯಾಂಕ್ ಇಡೀ ಕಾರ್ಯಕ್ರಮವನ್ನು ಸಂಘಟಿಸಿರುವುದು ಖಂಡನೀಯ ಎಂದರು.

ಹಾಗಾಗಿ ನೆನ್ನೆ ನಡೆದ ಕಾರ್ಯಕ್ರಮದ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಸಂಪೂರ್ಣ ತನಿಖೆ ನಡೆಸಬೇಕು ಸರ್ಕಾರಿ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವೆಂಬಂತೆ ಬಿಂಬಿಸಿ ಆಡಳಿತ ದೃಪಯೋಗಪಡಿಸಿಕೊಂಡಿರುವ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಅಗ್ರಹಿಸಿದರು.