ಸಿಎಂ ಸಿದ್ದರಾಮಯ್ಯನವರು tweet (x)ಮಾಡಿ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನಕ್ಕೆ ಆಹ್ವಾನ ನೀಡದೆ ಅವಮಾನ ಮಾಡಿದ್ದು ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವಕನಾಗಿ ಆಕ್ರೋಶವನ್ನು ಹೊರಹಾಕುವಬರದಲ್ಲಿ ಬಾಯಿ ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತವರು ಅಪ್ಪ ಅಮ್ಮ ಸೇರಿದಂತೆ ಹಿರಿಯರನ್ನು ಕೂಡ ಏಕವಚನದಲ್ಲಿ ಸಂಭೋಧಿಸುವುದು ರೂಢಿ

ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆ ಶೋಷಿತ ಸಮಾಜದಿಂದ ಬಂದವರು ಅವರ ಬಗ್ಗೆ ಅಪಾರ ಗೌರವವಿದೆ

ಏಕವಚನದಲ್ಲಿ ಸಂಭೋದಿಸಬಾರದಿತ್ತು. ಅಚತುರ್ಯದಿಂದ ಆದ ಈ ಪ್ರಮಾಧಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ