ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿ ನೂತನವಾಗಿ ಆಗಮಿಸಿರುವ ಶ್ರಿಯುತ ಮಾನ್ಯ ಗುರುದತ್ ಹೆಗಡೆ ಐ.ಎ.ಸ್, ಮಾನ್ಯ ಜಿಲ್ಲಾಧಿಕಾರಿಯವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್ ಪುಷ್ಪಗುಚ್ಚ ನೀಡಿ ಗೌರವ ಸಮರ್ಪಣೆ ಮಾಡಿ ಶುಭ ಹಾರೈಸಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಸಾರ್ವಜನಿಕರ ಅಭಿವೃದ್ಧಿ ಪರ ಮತ್ತು ಸೇವಾ ಮನೋಭಾವನೆಯೊಂದಿಗೆ ಸರ್ಕಾರದ ಮದ್ಯೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸುತ್ತಾ ಜಿಲ್ಲೆಯ ಪ್ರವಾಸಿ ತಾಣಗಳ ಮೂಲಸೌಕರ್ಯಗಳ ಅಭಿವೃದ್ಧಿಯ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕೈಗಾರಿಕಾಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಆಡಳಿತಾತ್ಮಕ ಸುವ್ಯವಸ್ಥೆಯನ್ನು ನಿರ್ವಹಿಸುವ ಆಶಾಭಾವನೆಯನ್ನು ಹೊಂದಿರುವುದಾಗಿ ಅಧ್ಯಕ್ಷರು ತಿಳಿಸಿದರು. ಮಾನ್ಯ ಜಿಲ್ಲಾಧಿಕಾರಿಗಳು ಸಂಘದ ವತಿಯಿಂದ ಆತ್ಮೀಯ ಗೌರವ ಸ್ವೀಕರಿಸಿ ಮಾತನಾಡಿ ಜಿಲ್ಲೆಯ ಅಭಿವೃದ್ಧಿಯ ನೆಲೆಯಲ್ಲಿ ಶಿವಮೊಗ್ಗ ಜನತೆ ಮತ್ತು ತಮ್ಮಗಳ ಸಲಹೆ-ಸಹಕಾರದೊಂದಿಗೆ ಜಿಲ್ಲೆಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರ‍್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೊಬಳೀದಾರ್, ನಿಕಟಪೂರ್ವ ಅಧ್ಯಕ್ಷರಾದ ಜೆ. ಆರ್ ವಾಸುದೇವ, ನಿರ್ದೇಶಕರುಗಳಾದ ಕೆ.ಎಸ್ ಸುಕುಮಾರ್, ಪರಮೇಶ್ವರ ಈ, ಪ್ರದೀಪ್ ವಿ.ಯಲಿ, ಜಗದೀಶ್ ಮಾತನವರ್, ಗಣೇಶ್ ಎಂ. ಅಂಗಡಿ, ಮಾಜಿ ಅಧ್ಯಕರುಗಳಾದ ಡಿ.ಎಂ. ಶಂಕರಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ