ಭಾರತೀಯ ಜನತಾ ಪಾರ್ಟಿ ವತಿ ಯಿಂದ ಪ್ರತಿಭಟನೆ ನಡೆಸಿದರು.ನೆನ್ನೆ ನಡೆದ ರಾಜ್ಯಸಭಾ ಚುನಾವಣೆಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಶಾಸಕ ನಾಸಿರ್ ಹುಸೇನ್ ರವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆಯನ್ನು ಕೂಗಿರುವುದನ್ನು ವಿರೋಧಿಸಿ ನಗರದ ಮಹಾವೀರ ವೃತ್ತದಲ್ಲಿ ಮಾಜಿ ಶಾಸಕ ಈಶ್ವರಪ್ಪ ರವರ ನೇತೃತ್ವದಲ್ಲಿ ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ವತಿಯಿಂದ ಪ್ರತಿಭಟನೆಯನ್ನು ಮಾಡಿದರು.

ಪ್ರತಿಭಟನೆಯಲ್ಲಿ ದೇಶದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರದ ಘೋಷಣೆಯನ್ನು ಕೂಗುತ್ತಾ ಕಾಂಗ್ರೆಸ್ ಕಚೇರಿಯನ್ನು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತೆಯರು ಸೇರಿದಂತೆ ಪ್ರತಿಭಟನಾಕಾರರನ್ನು ತಡೆದು ಬಂಧಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ವರದಿ : ಸಂತೋಷ್ ರಾಮ್