ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬವರನ್ನು ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಸ್ವತ್ತು ಮಾಡಿಸಲು ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದರು

ಕರ್ನಾಟಕ ಲೋಕಾಯುಕ್ತ ಪೊಲೀಸ್ ಪೊಲೀಸ್  ಅಧೀಕ್ಷಕ ವಾಸುದೇವ ರಾಮ  ರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿರುತ್ತಾರೆ

ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಶ್ರೀಮತಿ ಪ್ರತಿಭಾ ಎಂಬುವವರ ಖಾಲಿ ನಿವೇಶನದ ಇ ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕ ರನ್ನು ಭೇಟಿ ಮಾಡಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿರುತ್ತಾರೆ

ಇ ಸ್ವತ್ತಿಗಾಗಿ ಕಂದಾಯ ನಿರೀಕ್ಷಕರಾದ ವಿನಾಯಕ ರವರು 40,000 ಗಳ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ

ಈ ದೂರಿನ ಅನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್ ರವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿದು ಹಣವನ್ನು ಜಪ್ತಿ ಮಾಡಿ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿರುತ್ತಾರೆ

ಈ ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ರವರ ನೇತೃತ್ವದಲ್ಲಿ ನಡೆಸಲಾಯಿತು.
ಶಿವಮೊಗ್ಗ ಲೋಕಕ್ತ ಕಚೇರಿಯ ಪೊಲೀಸ್ ನಿರೀಕ್ಷಕರಾದ ಹೆಚ್ ಎಸ್ ಸುರೇಶ್ ಪೊಲೀಸ್ ಸಿಬ್ಬಂದಿಗಳಾದ ಮಹಾಂತೇಶ ಸಿಎಚ್‌ಸಿ. ಸುರೇಂದ್ರ ಸಿಎಚ್‌ಸಿ. ಯೋಗೀಶ್ ಸಿಎಚ್‌ಸಿ. ಬಿ ಟಿ ಚನ್ನೇಶ ಸಿಪಿಸಿ ಪ್ರಶಾಂತ್ ಕುಮಾರ್ ಸಿಪಿಸಿ ಅರುಣ್ ಕುಮಾರ್ ಸಿಪಿಸಿ ದೇವರಾಜ ಸಿಪಿಸಿ ರಘುನಾಯ್ಕ ಸಿಪಿಸಿ. ಕೆಸಿ ಜಯಂತ್ ಎಪಿಸಿ ವಿ ಗೋಪಿ ಎಪಿಸಿ ಮತ್ತು ಪ್ರದೀಪ್ ಕುಮಾರ್ ಎಸಿಪಿ ಡಿಕೆ ಗಂಗಾಧರ ಎಸಿಪಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು