ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ ಶ್ರೀ.ಮಧು ಬಂಗಾರಪ್ಪನವರು ಜುಲೈ 30ರಂದು ಹುಬ್ಬಳ್ಳಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್ ತಿಳಿಸಿದ್ದಾರೆ.ಪಕ್ಷದ ಸಂಘಟನೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೇಂದ್ರೀಕರಿಸಿಕೊಂಡು ದಿನಾಂಕ:30-07-2021ರಂದು ಶುಕ್ರವಾರ ಬೆಳಗ್ಗೆ 10.30ಗಂಟೆಗೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ವಿಭಾಗಮಟ್ಟದ ಕಾಂಗ್ರೆಸ್ ಅಧಿವೇಶನದಲ್ಲಿ ಶ್ರೀ. ಮಧು ಬಂಗಾರಪ್ಪರವರು ಕಾಂಗ್ರೆಸ್ ಸೇರುತ್ತಾರೆ. ಶಿವಮೊಗ್ಗದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಸಿ ಈ ಸಮಾವೇಶದಲ್ಲಿ ಶ್ರೀ ಮಧು ಬಂಗಾರಪ್ಪ ರವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಸುಂದರೇಶ್ ತಿಳಿಸಿದ್ದಾರೆ.ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೆಪಿಸಿಸಿ ಉಸ್ತುವಾರಿಗಳಾದ ಶ್ರೀ ರಣದೀಪ್ ಸುರ್ಜೇವಾಲಾ ರವರು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರು ಹಾಗೂ ಮಾಜಿ ಮುಖ್ಯಮಂತ್ರಿಗಳು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರು ಭಾಗವಹಿಸಲಿರುವ ಈ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷ ಪ್ರಮುಖರ ಸಮ್ಮುಖದಲ್ಲಿ ಶ್ರೀ ಮಧು ಬಂಗಾರಪ್ಪರವರು ಕಾಂಗ್ರೆಸ್ ಸೇರಲಿದ್ದಾರೆ.ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿದ್ದ ಶ್ರೀ ಮಧು ಬಂಗಾರಪ್ಪರವರ ಜೊತೆಗೆ ಜೆಡಿಎಸ್ ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರುತ್ತಾರೆ ಕಾಂಗ್ರೆಸ್ ಪಕ್ಷದ ಸಂಘಟನೆಯ ನಿಟ್ಟಿನಲ್ಲಿ ಕಾಂಗ್ರೆಸ್ ಗೆ ಆಗಮಿಸುತ್ತಿರುವ ಮಧು ಬಂಗಾರಪ್ಪರವರ ಆಗಮನದಿಂದ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬರುತ್ತದೆ. ಮಾಜಿ ಮುಖ್ಯಮಂತ್ರಿಗಳಾದ ದಿ॥ ಎಸ್ ಬಂಗಾರಪ್ಪನವರ ಪುತ್ರರಾದ ಶ್ರೀ ಮಧು ಬಂಗಾರಪ್ಪರವರು ಕಾಂಗ್ರೆಸ್ ಸೇರ್ಪಡೆಯಾಗುವ ಸನ್ನಿವೇಶವನ್ನು ವೀಕ್ಷಿಸಿ ಬೆಂಬಲಿಸಲು ಸೊರಬ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಬೆಂಬಲಿಸುತ್ತಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153