ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಸೊರಬ ಮಂಡಲದ ವತಿಯಿಂದ ಪಕ್ಷದ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ “ಪೇಜ್ ಪ್ರಮುಖ್ ಕಾರ್ಯಕರ್ತರ” ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ನೆರೆದಿದ್ದ ದೈವದುರ್ಲಭ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

ಕೇಂದ್ರದ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಎರಡು ಅವಧಿಯಲ್ಲಿ ವಿಶ್ವವೇ ಮೆಚ್ಚುವಂತಹ ಆಡಳಿತ ನೀಡಿದೆ. ಸಮಸ್ತ ಭಾರತೀಯರ ಏಳಿಗೆಗೆ ಐತಿಹಾಸಿಕ ಯೋಜನೆಗಳು ಕಾರ್ಯರೂಪಕ್ಕೆ ಬಂದು ಈಗಾಗಲೇ ಅರ್ಹ ಫಲಾನುಭವಿಗಳಿಗೆ ತಲುಪಿ ಆರ್ಥಿಕವಾಗಿ ಸಬಲಗೊಂಡು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಇಂತಹ ಫಲಾನುಭವಿಗಳು ಪ್ರತಿ ಬೂತ್ ಮಟ್ಟದಲ್ಲಿ ಇದ್ದು ಬೂತ್ ಮಟ್ಟದ ಕಾರ್ಯಕರ್ತರು ಖುದ್ದು ಭೇಟಿ ಮಾಡಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ಸೂಚಿಸುವಂತೆ ಕಾರ್ಯನಿರ್ವಹಿಸಬೇಕು ಈ ಮೂಲಕ ಪಕ್ಷದ ಧ್ಯೇಯ ವಾಕ್ಯವಾದ “ಈ ಬಾರಿ ನಾನೂರು ಮೀರಿ” ಯೋಜನೆಗೆ ಬಲ ತುಂಬಬೇಕು ಎಂದು ಆಗ್ರಹ ಪಡಿಸಲಾಯಿತು.

ಕಳೆದ ಮೂರು ಅವಧಿಯಲ್ಲಿ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡಿರುವ ಸಾಧನೆಯ ಪಟ್ಟಿಯನ್ನು ನೆರೆದಿದ್ದ ಕಾರ್ಯಕರ್ತರ ಮುಂದೆ ತೆರೆದಿಟ್ಟು ಭವಿಷ್ಯದಲ್ಲಿ ಇನ್ನಷ್ಟು ಬೃಹತ್ ಯೋಜನೆಗಳು ಜಿಲ್ಲೆಯಲ್ಲಿ ಜಾರಿಗೆ ತರುವ ಹಾಗೂ ಜಿಲ್ಲೆಯಲ್ಲಿ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಸುವ ಕಡೆಗೆ ಹೆಚ್ಚಿನ ಶ್ರಮ ವಹಿಸಿ ಅದರೆಡೆಗೆ ಶಕ್ತಿ ಮೀರಿ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿ ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಮತದಾರರಿಗೆ ಅಭಿವೃದ್ಧಿಯ ಮಾಹಿತಿ ತಲುಪಿಸುವಂತೆ ಈ ಮೂಲಕ ಅಭೂತಪೂರ್ವ ಗೆಲುವಿಗೆ ಸಹಕರಿಸಲು ಕರೆಕೊಡಲಾಯಿತು.

ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ ಮೇಘರಾಜ್ , ಶ್ರೀ ಕುಮಾರ್ ಬಂಗಾರಪ್ಪ , ಶ್ರೀ ಹರತಾಳು ಹಾಲಪ್ಪ , ಶ್ರೀ ಪ್ರಕಾಶ್ , ಶ್ರೀ ರಘುಪತಿ ಭಟ್ , ಶ್ರೀ ಅರುಣ್ ಶ್ರೀ ರುದ್ರೇಗೌಡರು ಶ್ರೀ ಭಾರತಿ ಶೆಟ್ಟಿ ಸೇರಿದಂತೆ ಪಕ್ಷದ ಅನೇಕ ಹಿರಿಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ