ಶಿವಮೊಗ್ಗದ ವಿನೋಬನಗರ ಸಮುದಾಯ ಭವನದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸನ್ ಫೆಸ್ಟ್ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಮಾಡಿದರು.

ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ ಅವರು ಮಾತನಾಡಿ ಬೇಸಿಗೆ ಶಿಬಿರಗಳು ಮಕ್ಕಳು ಕ್ರಿಯಾಶೀಲ ರಾಗಿರುವ ವಾತಾವರಣವನ್ನು ನಿರ್ಮಿಸುತ್ತವೆ. ಬೇಸಿಗೆ ಶಿಬಿರದ ಉಪಯೋಗವನ್ನು ವಿದ್ಯಾರ್ಥಿಗಳು ಬಳಸಿಕೊಂಡು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದಾ ಕ್ರಿಯಾಶೀಲ ರಾಗಲು ಬೇಕಾದ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕೆಂದು ಎಂದು ಹೇಳಿದರು.

15 ದಿನಗಳ ಕಾಲ ನಡೆಯುವ ಈ ಬೇಸಿಗೆ ಶಿಬಿರದಲ್ಲಿ ಕರಾಟೆ ಬಾಕ್ಸಿಂಗ ಡ್ಯಾನ್ಸ್ ಯೋಗ ಮತ್ತು ಟ್ರಕಿಂಗ್ ಚಟುವಟಿಕೆಗಳು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ಪ್ರಮುಖರಾದ ಬಾಲ್ರಾಜ್ ರಾಘವೇಂದ್ರ ಮಂಜುನಾಥ್ ನವೀನ್ ಭೀಮಪ್ಪ ನಾಗರಾಜ್ ಉಪಸ್ಥಿತರಿದ್ದರು.