ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಿಂದ ಪುರುದಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಇರುವ ಚಾನಲ್ ಹತ್ತಿರ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಹಾಗೂ ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ಬಾಬು ಆಂಜನಪ್ಪ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಎ, ಉಪ ವಿಭಾಗ ಮತ್ತು ಶ್ರೀ ಮಂಜುನಾಥ ಪೊಲೀಸ್ ನಿರೀಕ್ಷಕರು ತುಂಗಾನಗರ ಪೊಲೀಸ್ ಠಾಣೆರವರ ನೇತೃತ್ವದ ಶ್ರೀ ಜ್ಞಾನಮೂರ್ತಿ, ಪೋಲಿಸ್ ಉಪನಿರೀಕ್ಷಕರು ತುಂಗಾ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ.

ಕಿರಣ್ ಕುಮಾರ್, 30 ವರ್ಷ, ಕಲ್ಲಹಳ್ಳಿ ಹುಡ್ಕೋ ಶಿವಮೊಗ್ಗ ಈತನನ್ನು ವಶಕ್ಕೆ ಪಡೆದು ಅಂದಾಜು ಮೌಲ್ಯ 15,000/- ರೂ ಗಳ 400 ಗ್ರಾಂ ತೂಕದ ಒಣ ಗಾಂಜಾ ಮತ್ತು ರೂ 950/- ನಗದು ಹಣವನ್ನು ಅಮಾನತುಪಡಿಸಿಕೊಂಡು, ಆರೋಪಿ ಕಿರಣ್ ಕುಮಾರ್, ಕಲ್ಲಹಳ್ಳಿ ಹುಡ್ಕೋ, ಶಿವಮೊಗ್ಗ ಈತನ ವಿರುದ್ಧ ತುಂಗಾನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0165/2024 ಕಲಂ 20 (ಬಿ)NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ವರದಿ ಪ್ರಜಾ ಶಕ್ತಿ