ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ /ದುಡಿಮೆ ಖಾತರಿ” ಅಭಿಯಾನದಡಿ ಕೈಗೊಂಡಿರುವ ಕಾಮಗಾರಿ ಸ್ಥಳವಾದ ಕೊಮ್ಮನಾಳು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಿ, ಕಡ್ಡಾಯ ಮತದಾನದ ಬಗ್ಗೆ ತಿಳಿಸಲಾಯಿತು.


ಈ ಸಂದರ್ಭದಲ್ಲಿ ಶಿವಮೊಗ್ಗ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ.ಉ.ಖಾ.ಯೋ) ರವಿ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಹಿತ್ ಕುಮಾರ, ಡಾಟಾ ಎಂಟ್ರಿ ಆಪರೇಟರ್ ಪ್ರಭಾಕರ, ಬಿಲ್ ಕಲೆಕ್ಟರ್ ರವಿ.ಎ.ಹೆಚ್, ಕಾಯಕ ಬಂಧು ಮಂಜುನಾಥ, ರೂಪಾ.ಟಿ, ನಾಗರತ್ನ.ಎನ್, ತಾಂಡ ರೋಜ್ಗಾರ್ ಮಿತ್ರ, ಸ್ವ-ಸಹಾಯ ಸಂಘದ ಸದಸ್ಯರ, ಪಶುಸಖಿ, ಕೃಷಿ ಸಖಿ ಸಂಘದ ಸದಸ್ಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಬಿ.ಎಲ್.ಓ ರವರು ನರೇಗಾ ಅಕುಶಲ ಕಾರ್ಮಿಕರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ