ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಹೆಚ್ಚು ಇರುವ ಕಡೆ ರಕ್ಷಾ ಸಮುದಾಯದವರ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಸ್ವೀಪ್ ತಂಡದಿಂದ ಹಮ್ಮಿಕೊಳ್ಳಲಾಗಿತ್ತು.

ಅವರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವುದರ ಮೂಲಕ ಹಾಗೂ ಮತದಾನ ಗೀತೆಗೆ ನೃತ್ಯ ಮಾಡುವುದರ ಮೂಲಕ ಜಾಗೃತಿ ಮುಡಿಸಲಾಯಿತು. ಮತ್ತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಧ್ಯಕ್ಷರು ಪ್ಯಾರುದ ರವರು ಮಹಾನಗರ ಪಾಲಿಕೆಯ ನೋಡಲ್ ಅಧಿಕಾರಿ ಶ್ರೀಮತಿ ಅನುಪಮ.ಟಿ.ಆರ್. ಸುಪ್ರಿಯಾ ಹಾಗೂ ಅಧಿಕಾರಿಗಳಾದ ರತ್ನಾಕರ್, ರೇಣು, ಗೀತಾ, ಮತ್ತು ಸಿಬ್ಬಂದಿಗಳು, ಹಾಜರಿದ್ದರು.

ವರದಿ ಪ್ರಜಾ ಶಕ್ತಿ