BREAKING NEWS…

ಶಿವಮೊಗ್ಗ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ರವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.ಈ ವಿಷಯವನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಛಾಟಿಸಲಾಗಿದೆ.

ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಉಚ್ಛಾಟಿಸಲಾಗಿದೆ. ಜೊತೆಗೆ 6 ವರ್ಷ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶದಲ್ಲಿ ತಿಳಿಸಿದ್ದಾರೆ.