ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ತಾಲ್ಲೂಕಿನ ಆರಗ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಕೋಣಂದೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಇಂದು ಜೆಡಿಎಸ್ ಸಹಯೋಗದೊಂದಿಗೆ ಆಯೋಜಿಸಿದ್ಧ ಬ್ರಹತ್ “ಸಾರ್ವಜನಿಕ ಸಭೆ” ಯಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿ ಚುನಾವಣಾ ಪ್ರವಾಸ ಕೈಗೊಳ್ಳಲಾಯಿತು.

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಜನಮೆಚ್ಚಿದ ಆಡಳಿತ ನೀಡಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಿರುವ ಐತಿಹಾಸಿಕ ಯೋಜನೆಗಳ ಕುರಿತು ಹಾಗೂ ನನ್ನ ಲೋಕಸಭಾ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅನುಷ್ಠಾನಗೊಳಿಸಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಅಲ್ಲಿ ನೆರೆದಿದ್ದ ಮತದಾರ ಬಾಂಧವರ ಮುಂದೆ ಮುಕ್ತವಾಗಿ ತೆರೆದಿಡಲಾಯಿತು.

ರಾಜ್ಯದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಆಡಳಿತ ನಡೆಸಿದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಸೈಕಲ್ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆ, ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಯೋಜನೆ ಸೇರಿದಂತೆ ಇನ್ನೂ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರ ಜೀವನ ಮಟ್ಟ ಸುಧಾರಣೆಗೆ ತರಲು ಶ್ರಮಿಸಿದ್ದನ್ನು ಇದೇ ವೇದಿಕೆಯಲ್ಲಿ ನೆನಪು ಮಾಡಿಕೊಳ್ಳಲಾಯಿತು.

ಬರುವ ಮೇ 7 ರಂದು ಕ್ರಮ ಸಂಖ್ಯೆ 2ರ “ಕಮಲ” ದ ಗುರುತಿಗೆ ತಮ್ಮ ಅತ್ಯಮೂಲ್ಯ ಮತವನ್ನು ನೀಡುವುದರ ಮೂಲಕ ಅತ್ಯಧಿಕ ಮತಗಳ ಅಂತರದಿಂದ ವಿಜಯಮಾಲೆಯನ್ನು ಧರಿಸಲು ಸಹಕಾರ ನೀಡುವಂತೆ ಈ ಮೂಲಕ ದೇಶದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಸಹಕರಿಸುವಂತೆ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರು, ಮುಖಂಡರಾದ ಶ್ರೀ ಹರತಾಳು ಹಾಲಪ್ಪ ಅವರು, ಶ್ರೀ ನವೀನ್ ಹೆದ್ದೂರು ಅವರು, ಶ್ರೀ ಕಡಿದಾಳ್ ಗೋಪಾಲ್ ಅವರು, ಶ್ರೀ ಕುಕ್ಕೆ ಪ್ರಶಾಂತ್ ಅವರು, ಶ್ರೀ ಚಂದ್ರಶೇಖರ್ ಅವರು ಸೇರಿದಂತೆ ಇನ್ನು ಅನೇಕ ಪ್ರಮುಖರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ