ವಿನೋಬನಗರದ ಸ್ನೇಹಜೀವಿ ಗೆಳೆಯರ ಬಳಗ ಜಯನಗರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಶಿವಮೊಗ್ಗ ಇವರ ಆಶ್ರಯದಲ್ಲಿ ಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸಿದ್ಧನಗೌಡ ಅವರ ಮಾರ್ಗದರ್ಶನದಲ್ಲಿ ನಗರದ ಲಕ್ಷ್ಮಿ ಟಾಕೀಸ್ ವೃತ್ತದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡಲಾಯಿತು.


ಇತ್ತೀಚಿಗೆ ಹೈಕೋರ್ಟ್ ನ ಆದೇಶದಂತೆ 9 ತಿಂಗಳ ಮೇಲ್ಪಟ್ಟ ಮಕ್ಕಳು ಸೇರಿದಂತೆ ಹಿಂಬದಿಯ ಸವಾರರು ಸಹ ಹೆಲ್ಮೆಟ್ ಧರಿಸಬೇಕು
ಎಂಬ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಿಎಸ್ಐ ಶಕುಂತಲಾ ಮಂಜುನಾಥ್ ಮತ್ತು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಸ್ನೇಹಜೀವಿ ಗೆಳೆಯರ ಬಳಗದ
ಶರತ್ ಶಿವಮೂರ್ತಿ ಗಿರೀಶ್ ಸಂತೋಷ್ ಶಿವಮೊಗ್ಗ ವಿನೋದ್ ಶಿವಶರಣ ಶ್ರೀಮತಿ ಸವಿತಾ ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ